ದೇಶಕ್ಕೆ ಮೋದಿಯವರ ಕೊಡುಗೆ ಏನು…!? ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟಕೊಂಡು ಆಡಳಿತ ನಡೆಸುವುದನ್ನು ಬಿಟ್ಟರೆ ಯಾವುದೇ ಸಮಸ್ಯೆಗಳಿಗೆ ಮೋದಿಯವರ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ. ಯಡಿಯೂರಪ್ಪ ಅವರು ಸಿಎಂ ಆದ ಬಳಿಕ ಯಾವುದೇ ಹೊಸ ಕಾರ್ಯಕ್ರಮ ಘೋಷಣೆ ಮಾಡಿಲ್ಲ. ಕಳೆದ ಒಂದೂವರೆ ವರ್ಷದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿರುವುದನ್ನು ಹೊರತುಪಡಿಸಿದರೆ ಯಾವುದೇ ಸಾಧನೆ ಮಾಡಿಲ್ಲ.
ಡಿ ನೋಟಿಫಿಕೇಷನ್ ಕೇಸಲ್ಲಿ ಕೋರ್ಟ್ ಯಡಿಯೂರಪ್ಪ ಅವರಿಗೆ ಛೀಮಾರಿ ಹಾಕಿ 25 ಸಾವಿರ ದಂಡ ವಿಧಿಸಿದೆ. ಅವರಿಗೆ ಮರ್ಯಾದೆ ಇದ್ದರೆ ಕೂಡಲೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಂಥ ಲಜ್ಜೆಗೆಟ್ಟ ಸರ್ಕಾರ ರಾಜ್ಯದ ಇತಿಹಾಸದಲ್ಲಿ ಎಂದೂ ಬಂದಿರಲಿಲ್ಲ. ಇದು ನಾವು ಸುಮ್ಮನೆ ಕೂರುವ ಕಾಲವಲ್ಲ. ಹೋರಾಟ, ಸಂಘಟನೆ ನಮ್ಮ ಗುರಿಯಾಗಬೇಕು. ನಾವು ಹೋರಾಟ ಮಾಡಬೇಕಿರುವುದು ಮೋದಿ, ಯಡಿಯೂರಪ್ಪ ವಿರುದ್ಧ ಅಲ್ಲ. ಆರ್ ಎಸ್ ಎಸ್ ನ ಕೋಮುವಾದದ ವಿರುದ್ಧ. ನಮ್ಮ ಸಾಂಪ್ರದಾಯಿಕ ಮತಗಳು ವಿಭಜನೆ ಆಗಿದೆ. ಅದನ್ನು ವಾಪಸ್ ತರುವ ಪ್ರಯತ್ನ ಆಗಬೇಕು.ಕಾಂಗ್ರೆಸ್ ಸಂಕಲ್ಪ ಸಮಾವೇಶದಲ್ಲಿ ಸಿದ್ದರಾಮಯ್ಯ ಪ್ರಶ್ನೆ