
ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ; ಅಮೃತ್ ಪಾಲ್ ಜಾಮೀನು ಅರ್ಜಿ ವಜಾ
ಬೆಂಗಳೂರು: ಪಿಎಸ್ ಐ ಪರೀಕ್ಷಾ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾ ಮಾಡಿ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಐಪಿಎಸ್ ಅಮೃತ್ ಪಾಲ್ ಪಿಎಸ್ ಐ ಪರೀಕ್ಷೆಯ ಪರೀಕ್ಷೆಯ ನೇತೃತ್ವ ವಹಿಸಿದ್ದರು. ಉತ್ತರ ಪತ್ರಿಕೆಗಳಿದ್ದ ಸ್ಟ್ರಾಂಗ್ ರೂಮ್ ಕೀ ಪಾಲ್ ಬಳಿಯಿತ್ತು. ಪಾಲ್ ಸ್ಟ್ರಾಂಗ್ ರೂಮ್ ಕೀ ಇತರೆ ಆರೋಪಿಗಳಿಗೆ ನೀಡಿದ್ದು, ಒಎಂಆರ್ ಶೀಟ್ ತಿದ್ದಿರುವುದಾಗಿ FSL ವರದಿಯಲ್ಲಿ ದೃಢಪಟ್ಟಿದೆ. ಹೀಗಾಗಿ ಅಮೃತ್ ಪಾಲ್ ಅವರಿಗೆ ಜಾಮೀನು ನೀಡದಂತೆ ಸಿಐಡಿ ಪರ ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು.