
ಭಾರತ-ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯಕ್ಕೆ ಕ್ಷಣಗಣನೆ
ತರೌಬ : ಯುವ ಆಟಗಾರರೇ ಹೆಚ್ಚಿದ್ದರೂ ವಿಂಡೀಸ್ ವಿರುದ್ಧ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಭಾರತ, ಇದೀಗ ಟಿ20 ಸರಣಿಯತ್ತ ಚಿತ್ತ ಹರಿಸಿದೆ. ಶುಕ್ರವಾರ 5 ಪಂದ್ಯಗಳ ಟಿ20 ಸರಣಿಗೆ ಚಾಲನೆ ದೊರೆಯಲಿದ್ದು, ಭಾರತ ಶುಭಾರಂಭ ಮಾಡಲು ಎದುರು ನೋಡುತ್ತಿದೆ. ಟಿ20 ವಿಶ್ವಕಪ್ಗೆ ಕೇವಲ 3 ತಿಂಗಳು ಬಾಕಿ ಇರುವ ಕಾರಣ, ಇಲ್ಲಿಂದ ಮುಂದಕ್ಕೆ ಪ್ರತಿ ಪಂದ್ಯವೂ ಮಹತ್ವದೆನಿಸಲಿದೆ. ವಿಶ್ವಕಪ್ಗೆ ಬಲಿಷ್ಠ ತಂಡವನ್ನು ಕಟ್ಟಲು ಟೀಂ ಇಂಡಿಯಾ ಈ ಸರಣಿಯನ್ನು ಬಳಸಿಕೊಳ್ಳಲಿದೆ.
ನಾಯಕ ರೋಹಿತ್ ಶರ್ಮಾ ಸರಣಿಯಲ್ಲಿ ಆಡಲಿದ್ದು, ಕೋಚ್ ರಾಹುಲ್ ದ್ರಾವಿಡ್ ಜೊತೆ ಕೆಲ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬೇಕಿದೆ. ವಿಶ್ವಕಪ್ಗೆ ಸಿದ್ಧತೆ ನಡೆಸಲು ಭಾರತಕ್ಕೆ 16 ಪಂದ್ಯಗಳು (ವಿಂಡೀಸ್ ವಿರುದ್ಧ 5, ಏಷ್ಯಾಕಪ್ನಲ್ಲಿ 5-ಫೈನಲ್ ಪ್ರವೇಶಿಸಿದರೆ, ಆಸ್ಪ್ರೇಲಿಯಾ ವಿರುದ್ಧ 3, ದಕ್ಷಿಣ ಆಫ್ರಿಕಾ ವಿರುದ್ಧ 3) ಸಿಗಲಿವೆ. ಹೀಗಾಗಿ ಪ್ರತಿ ಪಂದ್ಯದಲ್ಲೂ ತನ್ನ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಬಲಿಷ್ಠ ತಂಡ ಕಟ್ಟುವತ್ತ ಟೀಂ ಇಂಡಿಯಾ ಚಿತ್ತ ನೆಟ್ಟಿದೆ. ರೋಹಿತ್ ಶರ್ಮಾ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಮತ್ತು ದಿನೇಶ್ ಕಾರ್ತಿಕ್ರಂತಹ ಘಟಾನುಘಟಿ ಬ್ಯಾಟರ್ಗಳ ಬಲ ಭಾರತ ತಂಡಕ್ಕಿದ್ದು,
ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಮಿಂಚಿದ ದೀಪಕ್ ಹೂಡಾ ಮೇಲೆ ಎಲ್ಲರ ಕಣ್ಣಿದೆ. ಇನ್ನು ಬೌಲರ್ಗಳ ನಡುವೆ ಪೈಪೋಟಿ ಇದ್ದು, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ಆರ್.ಅಶ್ವಿನ್, ರವಿ ಬಿಷ್ಣೋಯ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಪೈಕಿ ಯಾರಾರಯರಿಗೆ ಸ್ಥಾನ ಸಿಗಲಿದೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಅಶ್ರ್ದೀಪ್ ಸಿಂಗ್ ಪೈಕಿ ಒಬ್ಬರು ಹೊರಗುಳಿಯಲಿದ್ದಾರೆ.ಏಕದಿನಕ್ಕೆ ಹೋಲಿಸಿದರೆ ಟಿ20 ಮಾದರಿಯಲ್ಲಿ ವಿಂಡೀಸ್ ಬಲಿಷ್ಠವಾಗಿದ್ದ, ಆತಿಥೇಯರನ್ನು ಭಾರತ ಲಘುವಾಗಿ ಪರಿಗಣಿಸುವಂತಿಲ್ಲ. ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ವಿಂಡೀಸ್ನಿಂದ ಟೀಂ ಇಂಡಿಯಾಗೆ ಕಠಿಣ ಪೈಪೋಟಿ ಎದುರಾಗಬಹುದು.
ಸಂಭಾವ್ಯ ತಂಡಗಳು ಹೀಗಿವೆ ನೋಡಿ
ಭಾರತ:
ರೋಹಿತ್ ಶರ್ಮಾ(ನಾಯಕ), ರಿಷಭ್ ಪಂತ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಆರ್ಶದೀಪ್ ಸಿಂಗ್
ವೆಸ್ಟ್ ಇಂಡೀಸ್
ಬ್ರೆಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್(ನಾಯಕ), ಶಿಮ್ರೊನ್ ಹೆಟ್ಮೇಯರ್, ರೋಮನ್ ಪೋವೆಲ್, ಓಡೆನ್ ಸ್ಮಿತ್, ಜೇಸನ್ ಹೋಲ್ಡರ್, ಅಕೆಲ್ ಹುಸೇನ್, ರೊಮಾರಿಯೋ ಶೆಫರ್ಡ್, ಒಬೆಡ್ ಮೆಕಾಯ್, ಅಲ್ಜೆರಿ ಜೋಸೆಫ್.